ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸ್ಮಶಾನ ಕಾರ್ಮಿಕರು ಘನತೆ ಗೌರವದಿಂದ ಬದುಕು ಕಟ್ಟಿಕೊಳ್ಳಲು ಅವರ ಸೇವೆಯನ್ನು ಕಾಯಂ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಬುಧವಾರ ಹೇಳಿದರು.
ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ನಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಉಪಹಾರ ಸೇವಿಸಿದರು. ಈ ವೇಳೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ 117 ಸ್ಮಶಾನ ಕಾರ್ಮಿಕರನ್ನು ಕಾಯಂ ಮಾಡಲಾಗಿದೆ. ಉಳಿದ 30 ಸಿಬ್ಬಂದಿಗೆ ಅನುಕಂಪದ ಆಧಾರದಲ್ಲಿ ಕಾಯಂ ಮಾಡಲಾಗುವುದು. ರಾಜ್ಯದ ವಿವಿಧಡೆ 300 ಕಾರ್ಮಿಕರಿದ್ದು ಹಂತ ಹಂತವಾಗಿ ಕಾಯಂ ಮಾಡಲಾಗುವುದು ಎಂದರು.
ಸ್ಮಶಾನ ಕಾರ್ಮಿಕರನ್ನು ಇನ್ನು ಮುಂದೆ ಸತ್ಯಹರಿಶ್ಚಂದ್ರ ಬಳಗವೆಂದು ಕರೆಯಿರಿ. ಸತ್ತ ನಂತರ ಮುಕ್ತಿ ಕೊಡಿಸುವ ಮಹತ್ವದ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳು ಹೌದು. ಇವರು ಘನತೆಯಿಂದ ಬದುಕಬೇಕು ಅಂತಾ ಹೇಳಿದರು.