ಕೇಂದ್ರ ಮಾಜಿ ಸಚಿವ ನಿಧನ: ಗಣ್ಯರ ಸಂತಾಪ

364

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕೇಂದ್ರ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. 82 ವರ್ಷದ ಜಸ್ವಂತ್ ಸಿಂಗ್ ಅನಾರೋಗ್ಯದಿಂದ ಬಳಲುತ್ತಿದ್ದು. ಹೀಗಾಗಿ ಜೂನ್ 25ರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಬೆಳಗ್ಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಜಸ್ವಂತ್ ಸಿಂಗ್ ಅವರು ರಾಜಕೀಯಕ್ಕೆ ಬರುವ ಮೊದ್ಲು ಸೈನ್ಯದಲ್ಲಿದ್ದರು. ವಾಜಪೇಯಿ ಸರ್ಕಾರದಲ್ಲಿ ಹಲವು ಖಾತೆಗಳನ್ನ ನಿಭಾಯಿಸಿದ್ದಾರೆ. ಅವರ ನಿಧನದ ಸುದ್ದಿ ತುಂಬಾ ನೋವು ತಂದಿದೆ ಎಂದಿದ್ದಾರೆ.

ಇದೆ ರೀತಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಸಹ ಸಂತಾಪ ಸೂಚಿಸಿದ್ದಾರೆ. ಬಿಜೆಪಿ, ಕಾಂಗ್ರೆಸ್ ನಾಯಕರು ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!