ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ಕೇಂದ್ರ ಪ್ರವಾಹ ಅಧ್ಯಯನ ತಂಡಕ್ಕೆ ಘೆರಾವ್ ಹಾಕಿದ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಚಿಂಚಖಂಡಿ ಗ್ರಾಮದ ಬಳಿ ನಡೆದಿದೆ. ನಮ್ಮ ಸಮಸ್ಯೆಯನ್ನು ಕೇಳಿಕೊಂಡು ನೀವು ಮುಂದೆ ಹೋಗಿ ಎಂದು ಸ್ಥಳೀಯರು ಘೆರಾವ್ ಹಾಕಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ ರಾಜೇಂದ್ರ ಅವರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ.
ನೀವು ಬಂದು ವರದಿ ಮಾಡಿಕೊಂಡು ಹೋಗುತ್ತೀರಿ. ನೀವು ಬಂದು ಹೋಗುವುದಕ್ಕೆ ಆಗುವ ಖರ್ಚಿನಷ್ಟೂ ನಮಗೆ ಪರಿಹಾರ ಸಿಗುವುದಿಲ್ಲ. 2019ರಲ್ಲಿ ಘಟಪ್ರಭಾ ನದಿಯಿಂದ ಆದ ಹಾನಿಗೆ ಇಂದಿಗೂ ಪರಿಹಾರ ಸಿಕ್ಕಿಲ್ಲ. ನೀವು ಬಂದು ಹೋಗುವುದರಿಂದ ನಮಗೆ ಯಾವುದೇ ಪ್ರಯೋಜನವಿಲ್ಲವೆಂದು ಸಂತ್ರಸ್ತರು ತಮ್ಮ ಅಳಲು ತೋಡಿಕೊಂಡರು.