ಪ್ರಜಾಸ್ತ್ರ ಸುದ್ದಿ
ನವದೆಹಲಿ: ಬರ ಪರಿಹಾರ ಸಂಬಂಧ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದ ಕರ್ನಾಟಕ ಸರ್ಕಾರದ ಹೋರಾಟಕ್ಕೆ ಸಣ್ಣ ಗೆಲುವು ಸಿಕ್ಕಿದೆ. ಕೇಂದ್ರದಿಂದ ಶನಿವಾರ 3,454 ಕೋಟಿ ಬರ ಪರಿಹಾರ ಘೋಷಿಸಲಾಗಿದೆ.
ಕಳೆದ ಸೆಪ್ಟೆಂಬರ್ ನಲ್ಲಿ ಬರ ಪರಿಹಾರ ಸಂಬಂಧ ಕೇಂದ್ರಕ್ಕೆ 18,174 ಕೋಟಿ ರೂಪಾಯಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಪರಿಹಾರ ಬಿಡುಗಡೆ ಮಾಡದೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರದ ವಿರುದ್ಧ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಒಂದು ವಾರದೊಳಗೆ ಈ ಬಗ್ಗೆ ಕ್ರಮ ತೆಗೆದಿಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಹೇಳಿತ್ತು.
ಕರ್ನಾಟಕ ಸರ್ಕಾರದ ಬೇಡಿಕೆಗೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಮುಂದೆ ಹೇಳಿತ್ತು. ಅದರಂತೆ ಇದೀಗ ಪರಿಹಾರ ಘೋಷಿಸಿದೆ. ಇದರಿಂದಾಗಿ ರಾಜ್ಯಕ್ಕೆ ಸ್ವಲ್ಪ ಅನುಕೂಲವಾಗಲಿದೆ. ಇನ್ನು ಪ್ರವಾಹ, ಬಿರುಗಾಳಿಯಿಂದ ಹಾನಿಗೊಳಗಾದ ತಮಿಳುನಾಡಿಗೆ ಪರಿಹಾರ ಘೋಷಿಸಲಾಗಿದೆ.