ಅಮುಲ್ ಜೊತೆಗೆ ನಂದಿನಿ ಕೂಡಿಸುವ ಸುಳಿವು ನೀಡಿದ ಅಮಿತ್ ಶಾ

185

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಗುಜರಾತ್ ಮೂಲದ ಅಮುಲ್ ಸಂಸ್ಥೆಯೊಂದಿಗೆ ಕರ್ನಾಟಕ ಸರ್ಕಾರದ ನಂದಿನಿ ಕೂಡಿಸುವ ಸುಳಿವನ್ನು ಕೇಂದ್ರ ಗೃಹ ಸಚಿವ ಹಾಗೂ ಸಹಕಾರಿ ಸಚಿವ ಅಮಿತ್ ಶಾ ನೀಡಿದ್ದಾರೆ. ಗೆಜ್ಜಲಗೆರೆ ಡೇರಿ ಸಂಕೀರ್ಣದಲ್ಲಿ ಮೆಗಾ ಡೇರಿ ಉದ್ಘಾಟನೆ ಮಾಡಿ ಮಾತನಾಡಿದರು.

ಹಾಲು ಉತ್ಪಾದನೆ ಕ್ಷೇತ್ರದಲ್ಲಿ ಅಮುಲ್ ಜೊತೆಗೆ ನಂದಿನಿ ಕೆಲಸ ಮಾಡಿದರೆ ಇನ್ನು ಹೆಚ್ಚಿನ ಲಾಭ ಪಡೆಯಬಹುದು. ಇದಕ್ಕೆ ಬೇಕಾದ ಎಲ್ಲ ಸಹಾಯ ಸಹಕಾರ ನೀಡಲಾಗುವುದು ಎಂದರು. ಇನ್ನು ಸಹಕಾರಿ ಕ್ಷೇತ್ರದಲ್ಲಿ ಕರ್ನಾಟಕ ಮಾಡಿದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದಾದ ನಂತರ ಮಂಡ್ಯದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ ಜನ ಸಂಕಲ್ಪ ಸಮಾವೇಶ ಉದ್ದೇಶಿಸಿ ಮಾತನಾಡಿದರು.




Leave a Reply

Your email address will not be published. Required fields are marked *

error: Content is protected !!