ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕೇಂದ್ರದ ಆಹಾರ ಸಂಸ್ಕರಣಾ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿರೋಮಣಿ ಅಕಾಲಿದಳದ ಏಕೈಕ ಸಚಿವೆ ರಾಜೀನಾಮೆ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರದ ಕೃಷಿಗೆ ಸಂಬಂಧಿಸಿದ ಮಸೋದೆ ಮಂಡನೆಗೆ ವಿರೋಧ ವ್ಯಕ್ತಪಡಿಸಿದ ಬೆನ್ನೆಲ್ಲೇ ತಮ್ಮ ಅಭ್ಯರ್ಥಿಯನ್ನ ಸಚಿವ ಸಂಪುಟದಿಂದ ಹಿಂದಕ್ಕೆ ಕರೆದುಕೊಂಡಿದೆ. ಈ ಬಗ್ಗೆ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖ್ ಬೀರ್ ಸಿಂಗ್ ತಿಳಿಸಿದ್ದಾರೆ.
ರೈತರು ಹಾಗೂ ರೈತ ಸಂಘಗಳ ಬೇಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಸೋದನೆ ಮಂಡಿಸದೆ. ಕೇವಲ ಕೃಷಿ ಉತ್ಪನ್ನ ಮಾರಾಟ ಹಾಗೂ ವಾಣಿಜ್ಯ, ಕೃಷಿ ಸೇವೆ ಮತ್ತು ಬೆಲೆ ನಿಗದಿ ಹಾಗೂ ಅಗತ್ಯ ವಸ್ತುಗಳ ತಿದ್ದುಪಡಿ ಮಸೂದೆಯನ್ನ ಮಂಡಿಸಲು ಮುಂದಾಗಿರುವುದ್ರಿಂದ ಶಿರಮೋಣಿ ಅಕಾಲಿದಳ ಈ ನಿರ್ಧಾರ ತೆಗೆದುಕೊಂಡಿದೆ.