ಕೇಂದ್ರ ಸಚಿವ ಜೋಶಿಗೆ ಕೋವಿಡ್: ಈ ನಾಯಕರಿಗೆ ಟೆನ್ಷನ್ ಶುರು

293

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಕಳೆದ ಎರಡು ದಿನಗಳಿಂದ ರಾಯಚೂರು ಮತ್ತು ಬೆಳಗಾವಿ ಪ್ರವಾಸ ಮುಗಿಸಿಕೊಂಡು ಬಂದ ನಂತರ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೂ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರೇ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಫೇಸ್ ಬುಕ್ ಬರಹ ಹೀಗಿದೆ.. ‘ಆತ್ಮೀಯರೇ ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್ ಆಗಿದ್ದೇನೆ’.

ಮೊನ್ನೆಯಷ್ಟೆ ಬೆಳಗಾವಿಗೆ ಹೋಗಿ, ಈಚೆಗೆ ನಿಧನಾಗಿರುವ ಕೇಂದ್ರ ಸಚಿವ ಸುರೇಶ ಅಂಗಡಿ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ರು. ನಂತರ ಪತ್ರಿಕಾಗೋಷ್ಠಿಯನ್ನೂ ನಡೆಸಿದ್ರ. ಈ ವೇಳೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮೊದಲಾದವರಿದ್ದರು. ಈಗ ಎಲ್ಲರಿಗೂ ಆತಂಕ ಶುರುವಾಗಿದೆ.




Leave a Reply

Your email address will not be published. Required fields are marked *

error: Content is protected !!