ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ತಪ್ಪು: ಜೋಶಿ

276

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ತಪ್ಪು. ಅವರು ವಿಪಕ್ಷ ನಾಯಕರು, ಎಲ್ಲಿ ಬೇಕಾದರೂ ಹೋಗಬಹುದು, ಪರಿಶೀಲನೆ ಮಾಡಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಸಿದ್ದರಾಮಯ್ಯನವರ ಕಾಂಗ್ರೆಸ್ ಹಿರಿಯ ನಾಯಕರು. ಯಾವುದೇ ನಾಯಕರಿಗೆ ಈ ರೀತಿ ಮಾಡಬಾರದು. ಸಾವರ್ಕರ್ ಅವರ ಬಗ್ಗೆ ಮಾತನಾಡುವಾಗ ಯಾರ ಮನಸ್ಸಿಗೂ ನೋವಾಗದಂತೆ ಮಾತನಾಡಬೇಕು. ಇದು ಎಲ್ಲರೂ ತಿಳಿದುಕೊಳ್ಳಬೇಕು ಎಂದರು.




Leave a Reply

Your email address will not be published. Required fields are marked *

error: Content is protected !!