ಪ್ರಜಾಸ್ತ್ರ ಸುದ್ದಿ
ಕಲಬುರಗಿ: ಜಿಲ್ಲೆಯ ಕಡಗಂಚಿ ಬಳಿಯಿರುವ ಕೇಂದ್ರೀಯ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವದಲ್ಲಿ ಐವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗ್ತಿದೆ. ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ, ಖ್ಯಾತ ಕವಿ ಚೆನ್ನವೀರ ಕಣವಿ, ಬರಹಗಾರ ಎಂ.ಜಿ ಬಿರಾದಾರ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ, ಬಾಹ್ಯಾಕಾಶ ವಿಜ್ಞಾನಿ ಕೆ.ಶಿವನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗ್ತಿದೆ.
ಸೆಪ್ಟೆಂಬರ್ 23ರಂದು ನಡೆಯುವ ವರ್ಚುವಲ್ ಸಮಾರಂಭದಲ್ಲಿ ಈ ಐವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಿಲಾಗ್ತಿದೆ. ಅಂದು 38 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 25 ವಿದ್ಯಾರ್ಥಿಗಳಿಗೆ ಪಿಎಚ್.ಡಿ, 665 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗ್ತಿದೆ.