ಪ್ರಜಾಸ್ತ್ರ ಸುದ್ದಿ
ನವದೆಹಲಿ: ನೂತನ ಸಂಸತ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿದೆ. ದೇಶದಲ್ಲಿ ಕೋವಿಡ್ ಸಂಕಷ್ಟದಲ್ಲಿ ಮುಳುಗಿದೆ. ಹೀಗಾಗಿ ಸೆಂಟ್ರಲ್ ವಿಸ್ತಾ ಯೋಜನೆಗೆ ತಡೆ ನೀಡಬೇಕೆಂದು ಸಲ್ಲಿದ್ದ ಅರ್ಜಿಯ ವಿಚಾರಣೆ ಮೇ 31ರಂದು ನಡೆಸಿದ ದೆಹಲಿ ಹೈಕೋರ್ಟ್, ಇದೊಂದು ಅಗ್ಯತದ ಯೋಜನೆಯಾಗಿದೆ. ಕಾಮಗಾರಿ ಮುಂದುವರೆಯಲಿದೆ ಎಂದಿದೆ.
ಅಲ್ದೇ, ಅರ್ಜಿ ಸಲ್ಲಿಸಿದವರಿಗೆ 11 ಲಕ್ಷ ರೂಪಾಯಿ ದಂಡ ಸಹ ವಿಧಿಸಿದೆ. ಇದೀಗ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಪ್ರದೀಪಕುಮಾರ ಯಾದವ ಎಂಬುವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಯೋಜನೆಯ ಕಾಮಗಾರಿಯನ್ನ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.