ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳು ಆರಂಭವಾಗಿವೆ. ಆಗಸ್ಟ್ 30ಕ್ಕೆ ಪರೀಕ್ಷೆಗಳು ಮುಗಿಯಲಿವೆ. ಪರೀಕ್ಷೆ ಮುಗಿದು 20 ದಿನಗಳಲ್ಲಿ ಸಿಇಟಿ ಫಲಿತಾಂಶ ಬರಲಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ನಗರದ ಶೇಷಾದ್ರಿಪುರಂ ಕಾಲೇಜಿಗೆ ಭೇಟಿ ನೀಡಿದ ನಂತರ ಮಾತ್ನಾಡಿದ್ರು. ಈ ತಿಂಗಳು 30ಕ್ಕೆ ಪರೀಕ್ಷೆ ಮುಗಿಯುತ್ತವೆ. 20 ದಿನಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಅಕ್ಟೋಬರ್ ನಲ್ಲಿ ಕೌನ್ಸಲಿಂಗ್ ಪ್ರಕ್ರಿಯೆ ನಡೆಸಲಾಗುತ್ತೆ ಅಂತಾ ಹೇಳಿದ್ರು.
ಬೆಂಗಳೂರಿನಲ್ಲಿ 86 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 530 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗ್ತಿದೆ. 2,01,816 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಜಿಲ್ಲಾ ಕೇಂದ್ರಗಳಿಂದಲೂ ಮಾಹಿತಿ ಬಂದಿದ್ದು, ಎಲ್ಲಿಯು ಯಾವುದೇ ಸಮಸ್ಯೆಯಿಲ್ಲವೆಂದು ತಿಳಿಸಿದ್ರು.