ಪ್ರಜಾಸ್ತ್ರ ಸುದ್ದಿ
ಮೈಸೂರು: ಕಳೆದ ಹಲವು ದಿನಗಳಿಂದ ಭರ್ಜರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಪ್ರವಾಸಿಗರಿಗೆ ಹಾಗೂ ಭಕ್ತರ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಬೆಟ್ಟದಲ್ಲಿರುವ ನಂದಿ ವಿಗ್ರಹಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕುಸಿತ ಕಂಡು ಬಂದಿದೆ. ಹೀಗಾಗಿ ತಾತ್ಕಾಲಿಕವಾಗಿ ಸಂಚಾರ ಬಂದ್ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ.ಚಂದ್ರ ಗುಪ್ತಾ ಮಾಹಿತಿ ನೀಡಿದ್ದಾರೆ.