ಮಗಳ ಹುಟ್ಟು ಹಬ್ಬಕ್ಕೆ ಸುತ್ತೋಲೆ ಹೊರಡಿಸಿದ ಕುವೆಂಪು ವಿವಿ ಕುಲಪತಿ

151

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಅಧಿಕಾರಿಗಳು ತಮ್ಮ ಹುದ್ದೆಯ ಘನತೆ ಮರೆತು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲೆಯ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ತಮ್ಮ ಮಗಳ ಹುಟ್ಟು ಹಬ್ಬದ ಕುರಿತು ಸುತ್ತೋಲೆ ಹೊರಡಿಸಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ನನ್ನ ಮಗಳಾದ ಕು.ಆಕಾಂಕ್ಷ.ಬಿ.ವಿ ಜನ್ಮದಿನದ ಪ್ರಯುಕ್ತ ದಿನಾಂಕ 28/05/2023ರ ಮಧ್ಯಾಹ್ನ 12.30ಕ್ಕೆ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕುಲಪತಿಗಳ ಗೃಹದಲ್ಲಿ ಸಂತೋಷಕೂಟವನ್ನು ಏರ್ಪಡಿಸಲಾಗಿದೆ. ಇದರಲ್ಲಿ ವಿವಿ ಎಲ್ಲ ಪ್ರಾಧ್ಯಾಪಕರು, ಅಧ್ಯಾಪಕೇತರ ನೌಕರರು, ಅತಿಥಿ ಉಪನ್ಯಾಸಕರು, ಏಜನ್ಸಿ ನೌಕರರು ತಪ್ಪದೆ ಹಾಜರಾಗಬೇಕೆಂದು ಕೋರಿದ್ದಾರೆ. ಇದನ್ನು ವೈಯಕ್ತಿಕ ಆಹ್ವಾನವೆಂದು ಭಾವಿಸಿ ಎಲ್ಲರೂ ಈ ಸಂತೋಷಕೂಟದಲ್ಲಿ ಭಾಗವಹಿಸಬೇಕೆಂದು ಕೇಳಿಕೊಳ್ಳುತ್ತೇನೆ ಅಂತಾ ಹೇಳಿದ್ದಾರೆ.

ಈ ಸುತ್ತೋಲೆ ಎಲ್ಲೆಡೆ ವೈರಲ್ ಆಗಿದೆ. ಇದು ಅಧಿಕಾರಿ ದುರಂಹಕಾರವಾಗಿದೆ. ಇವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ. ಕುವೆಂಪು ಅವರ ಹೆಸರಿನ ವಿಶ್ವವಿದ್ಯಾಲಯಕ್ಕೆ ಅಗೌರವ ತರುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!