ಪ್ರಜಾಸ್ತ್ರ ಸುದ್ದಿ
ಅಮರಾವತಿ: ಟಿಡಿಪಿ ಮುಖ್ಯಸ್ಥ, ಮಾಜಿ ಸಿಎಂ ಎನ್.ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಲಾಗಿದೆ. ಅಕ್ಟೋಬರ್ 19ರ ತನಕ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಎಸಿಬಿ ಕೋರ್ಟ್ ಆದೇಶಿಸಿದೆ.
ಕೌಶಲ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ. ಜಾಮೀನು ಸಿಗದೆ ಒದ್ದಾಡುತ್ತಿದ್ದು, ಮೂರನೇ ಬಾರಿಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.