ಆ.23 ಇನ್ಮುಂದೆ ರಾಷ್ಟ್ರೀಯ ಬಾಹ್ಯಾಕಾಶ ದಿನ: ಪ್ರಧಾನಿ ಘೋಷಣೆ

248

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಇಸ್ರೋ ಕಚೇರಿಗೆ ಶನಿವಾರ ಮುಂಜಾನೆ ಭೇಟಿ ನೀಡಿದ ಪ್ರಧಾನಿ ಮೋದಿ, ವಿಜ್ಞಾನಿಗಳಿಗೆ ಅಭಿನಂದಿಸಿದರು. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ದೇಶಕ್ಕೆ ಗೊತ್ತಾಗಿದೆ. ನಾನು ವಿದೇಶದಲ್ಲಿ ಇರುವಾಗಲೇ ಇಸ್ರೋಗೆ ಭೇಟಿ ನೀಡಲು ನಿರ್ಧರಿಸಿದೆ. ಹೀಗಾಗಿ ಅಲ್ಲಿಂದ ನೇರವಾಗಿ ಇಲ್ಲಿಗೆ ಬಂದಿದ್ದೇನೆ ಎಂದರು.

ಇಡೀ ಜಗತ್ತು ಭಾರತ ವಿಜ್ಞಾನ, ತಂತ್ರಜ್ಞಾನ ಒಪ್ಪಿಕೊಂಡಿದೆ. ನಿಮ್ಮ ಸಾಧನೆ ಎಲ್ಲರಿಗೂ ಸ್ಪೂರ್ತಿಯಾಗಿದೆ. ನೀವು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದೀರಿ. ಇನ್ನು ಮುಂದೆ ಆಗಸ್ಟ್ 23 ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಿಸಿದರು. ಈ ವೇಳೆ ಜೈ ಜವಾನ್ ಜೈ ಕಿಸಾನ್ ಜೈ ವಿಜ್ಞಾನ ಎಂದು ಜೈಕಾರ ಹಾಕಿದರು.

ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ಶಿವಶಕ್ತಿ ಪಾಯಿಂಟ್, ಚಂದ್ರಯಾನ-2 ಪತನಗೊಂಡ ಸ್ಥಳವನ್ನು ತಿರಂಗ ಪಾಯಿಂಟ್ ಎಂದು ಕರೆಯೋಣ. ಮೇಕ್ ಇನ್ ಇಂಡಿಯಾ ಇದೀಗ ಚಂದ್ರನವರೆಗೂ ತಲುಪಿದೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!