ಜೈನಮಠದ ಚಾರುಕೀರ್ತಿ ಸ್ವಾಮೀಜಿ ವಿಧಿವಶ

148

ಪ್ರಜಾಸ್ತ್ರ ಸುದ್ದಿ

ಹಾಸನ: ಶ್ರವಣಬೆಳಗೊಳದ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ(73) ಗುರುವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳುತ್ತಿದ್ದ ಅವರು, ಇಂದು ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಳ್ಳೂರಿನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮುಂಜಾನೆ ನಿಧನರಾಗಿದ್ದಾರೆ. ಜೈನಭಟ್ಟಾರಕ ಸ್ವಾಮೀಜಿಗಳು ಸ್ವಸ್ತಿ ಶ್ರೀ ಚಾರುಕೀರ್ತಿ ಅನ್ನೋ ಬಿರುದಾಂಕಿತದಿಂದ ಪ್ರಸಿದ್ಧಿ ಪಡೆದಿದ್ದಾರೆ.

ಸ್ವಾಮೀಜಿಗಳ ನಿಧನದ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಸೇರಿದಂತೆ ವಿಪಕ್ಷ ನಾಯಕರು, ವಿವಿಧ ಕ್ಷೇತ್ರಗಳ ಗಣ್ಯರು, ಜೈನ್ ಸಮುದಾಯದ ಮುಖಂಡರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!