ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ತೋಳ ಕಚ್ಚಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. 37 ವರ್ಷದ ಮಲ್ಲಪ್ಪ ಶಿವಪ್ಪ ಕೊಡಗಿ ಮೃತಪಟ್ಟ ರೈತನಾಗಿದ್ದಾನೆ. ಹುಬ್ಬಳ್ಳಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ನಿಡಗುಂದಿ ತಾಲೂಕಿನ ಮಸೂತಿ ಗ್ರಾಮದಲ್ಲಿ ಮಲ್ಲಪ್ಪ ಕೂಡಗಿ, ಹೊಲಕ್ಕೆ ನೀರು ಬಿಡಲು ಹೋದಾಗ ಒಂದು ವಾರದ ಹಿಂದೆ ತೋಳ ಕಚ್ಚಿತ್ತು. ಹೀಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾನೆ.