ಪ್ರಜಾಸ್ತ್ರ ಸುದ್ದಿ
ಮಂಗಳೂರು: ದಲಿತ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಮಂಗಳೂರಿನಲ್ಲಿ ಮಾತ್ನಾಡಿದ ಸಿದ್ದರಾಮಯ್ಯ, ಬಿಜೆಪಿಯವರು ದಲಿತ ಸಿಎಂ ಮಾಡಿ ನೋಡೋಣ ಎಂದಿದ್ದಾರೆ.
ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗೆ ಇಳಿಸಿ ಮತ್ತೊಬ್ಬರನ್ನ ಸಿಎಂ ಮಾಡಲು ಬಿಜೆಪಿಯಲ್ಲಿ ಸಿದ್ಧತೆ ನಡೆದಿದೆ. ಆದ್ರೆ, ಮುಂದಿನ ಸಿಎಂ ಯಾರು ಅನ್ನೋದು ಗೊತ್ತಿಲ್ಲ. ದಲಿತರನ್ನ ಸಿಎಂ ಮಾಡುವುದಕ್ಕೆ ಈಗ ಬಿಜೆಪಿಗೆ ಅವಕಾಶ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.