ಶಿವಮೊಗ್ಗ: ಕರೋನಾ ಸೋಂಕು ನಿಯಂತ್ರಣಕ್ಕಾಗಿ ಸಿಎಂ ಪರಿಹಾರ ನಿಧಿಗೆ ರಾಜ್ಯ ಸರ್ಕಾರಿ ನೌಕರರು ದೇಣಿಗೆ ನೀಡ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿದ್ದಾರಂತೆ.
ರಾಜ್ಯದ ಸರ್ಕಾರಿ ನೌಕರರು ಒಂದು ದಿನದ ವೇತನ ನೀಡ್ತಿದ್ದು, ಇದು ಸುಮಾರು 200 ಕೋಟಿ ಆಗಲಿದೆ ಎಂದು ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಹೇಳಿದ್ದಾರೆ ಅನ್ನೋದು ತಿಳಿದು ಬಂದಿದೆ. ಈ ಹಿಂದೆ ಪ್ರವಾಹದ ಟೈಂನಲ್ಲಿಯೂ ಸಹ ಆರ್ಥಿಕ ನೆರವು ನೀಡಲಾಗಿತ್ತು. ಈ ಬಾರಿಯೂ ಕರೋನಾ ಸೋಂಕು ತಡೆಗೆ ಒಂದು ದಿನ ವೇತನ ನೀಡಲಾಗುತ್ತೆ ಅನ್ನೋ ಮಾತುಗಳು ಕೇಳಿ ಬಂದಿವೆ.