ಪ್ರಜಾಸ್ತ್ರ ಸುದ್ದಿ
ರಾಮನಗರ: ಚಿಕ್ಕಬಳ್ಳಾಪುರದಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣ ಸಂಬಂಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾತ್ನಾಡಿದ್ದು, ಜನಪ್ರತಿನಿಧಿಗಳಿಂದಲೇ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.
ಒಂದು ವಾರದ ಮೊದ್ಲೇ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಪರಿಶೀಲನೆ ನಡೆಸಿದ್ದಾರೆ. ಅಂದ್ರೆ, ಘಟನೆ ಬಗ್ಗೆ ಅವರಿಗೆ ಮೊದಲೇ ಮಾಹಿತಿ ಇತ್ತು ಎನಿಸ್ತಿದೆ. ಘಟನೆ ನಡೆದಾಗ ಮಾಧ್ಯಮಗಳ ಮುಂದೆ ಬರುವ ಸಚಿವರುಗಳಿಗೆ ಜನರ ಜೀವದ ಬಗ್ಗೆ ಕಮಿಟ್ಮೆಂಟ್ ಇಲ್ಲ ಎಂದು ಕಿಡಿ ಕಾರಿದ್ದಾರೆ.