ಪ್ರಜಾಸ್ತ್ರ ಸುದ್ದಿ
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ಇನ್ನೇನು ಎರಡ್ಮೂರು ತಿಂಗಳು ಬಾಕಿ ಉಳಿದಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚಿಕ್ಕಬಳ್ಳಾಪುರದಿಂದ ನನಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡುವ ವಿಶ್ವಾಸವಿದೆ. ನಮ್ಮ ತ್ಯಾಗಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಅನ್ಯಾಯಾಗಿದೆ ಎಂದು ಮಾಜಿ ಸಚಿವ ಕೆ.ಸುಧಾಕರ್ ಹೇಳಿದರು.
ಹೆಚ್.ಡಿ ದೇವೇಗೌಡ, ಕುಮಾರಸ್ವಾಮಿ ಸಮ್ಮತಿ ಸೂಚಿಸಿದ್ದಾರೆ. ಕೆಲಸ ಮಾಡಲು ತಿಳಿಸಿದ್ದಾರೆ. ಒಬ್ಬ ಸಂಸದ ಏನು ಮಾಡಲು ಸಾಧ್ಯ ಎನ್ನುವುದನ್ನು ತೋರಿಸುತ್ತೇನೆ ಅಂತಾ ಹೇಳಿದರು. ಇತ್ತೀಚೆಗೆ ದೆಹಲಿಗೆ ಭೇಟಿ ಕೊಟ್ಟು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.