ಪ್ರಜಾಸ್ತ್ರ ಸುದ್ದಿ
ಆನೇಕಲ್: ಇಚರ್ ವಾಹನ ಹಿಂದಕ್ಕೆ ತೆಗೆದುಕೊಳ್ಳುವಾಗ ಆಕಸ್ಮಿಕವಾಗಿ ಮಗುವೊಂದು ವಾಹನಕ್ಕೆ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಕಾಮನಹಳ್ಳಿಯಲ್ಲಿ ನಡೆದಿದೆ. ಒಂದೂವರೆ ವರ್ಷದ ಮನಿಶಾದೇವಿ ಮೃತ ಬಾಲಕಿಯಾಗಿದ್ದಾಳೆ.
ಬಾಲಕಿ ತಂದೆ ಬಾಲಕೃಷ್ಣ ಮನೆ ಮುಂದೆ ನಿಲ್ಲಿಸಿದ ಇಚರ್ ವಾಹನ ರಿವರ್ಸ್ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.