ಹೆಸ್ಕಾಂ ನಿರ್ಲಕ್ಷ್ಯಕ್ಕೆ 4 ವರ್ಷದ ಮಗು ಬಲಿ!

371

ವಿಜಯಪುರ: ನಗರದ ಕೋರ್ಟ್ ಆವರಣದಲ್ಲಿನ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸಿ 4 ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಸಿದ್ದ ಮಲಕಾರಿ ಒಡೆಯರ ಮೃತ ಬಾಲಕ.

ತಂದೆಯೊಂದಿಗೆ ಕೌಟುಂಬಿಕ ನ್ಯಾಯಾಲಯಕ್ಕೆ ಮಗು ಬಂದಿದೆ. ಈ ವೇಳೆ ಮಗುವಿನ ತಂದೆ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ನೀರು ಕುಡಿಯಲು ಹೋದ ಸಂದರ್ಭದಲ್ಲಿ ಪಕ್ಕದಲ್ಲಿದ್ದ ವಿದ್ಯುತ್ ಕಂಬದಿಂದ ಮಗುವಿಗೆ ವಿದ್ಯುತ್ ತಗುಲಿದೆ. ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯ್ತು. ಆದ್ರೆ, ಮಾರ್ಗಮಧ್ಯೆಯೇ ಮಗು ಸಾವನ್ನಪ್ಪಿದೆ.

ಈ ಸಂಬಂಧ ವಿಜಯಪುರದ ಜಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋರ್ಟ್ ಆವರಣಲ್ಲಿರುವ ವಿದ್ಯುತ್ ಕಂಬಗಳಿಗೆ ವಿದ್ಯುತ್ ಪ್ರವಹಿಸ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಹೆಸ್ಕಾಂ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಅಂತಾ ಸಾರ್ವಜನಿಕರು ಹೇಳ್ತಿದ್ದಾರೆ. ಆದ್ರೆ, ಇಲಾಖೆಯ ನಿರ್ಲಕ್ಷ್ಯದಿಂದಾಗಿ ಮಗುವೊಂದು ಬಲಿಯಾಗಿದೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!