ಪ್ರಜಾಸ್ತ್ರ ಸುದ್ದಿ
ಕೊಲ್ಹಾರ: ಮಕ್ಕಳಿಬ್ಬರು ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಚಿಕ್ಕಆಸಂಗಿ ಗ್ರಾಮದಲ್ಲಿ ನಡೆದಿದೆ. ಬೋರಮ್ಮ ಸಂಗಣ್ಣ ಬೆನ್ನೂರು(4) ಹಾಗೂ ಆಕಾಶ ಮಹಾದೇವ ಬೆನ್ನೂರು(4) ಅನ್ನೋ ಮಕ್ಕಳು ಮೃತಪಟ್ಟಿದ್ದಾರೆ.
ಆಟವಾಡುತ್ತಿದ್ದ ಚಿಕ್ಕಪ್ಪನ ಜಮೀನು ಕಡೆ ಮಕ್ಕಳು ಹೋಗಿವೆ. ಈ ವೇಳೆ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಕೊಲ್ಹಾರ ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.