ಪ್ರಜಾಸ್ತ್ರ ಸುದ್ದಿ
ಮಂಡ್ಯ: ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನ ಆಸ್ಪತ್ರೆಗೆ ಕರೆದುಕೊಂಡು ಬಂದ್ರೆ, ಕೋವಿಡ್ ಟೆಸ್ಟ್ ಮಾಡಿಸಿಲ್ಲ ಅನ್ನೋ ಕಾರಣಕ್ಕೆ ಆಸ್ಪತ್ರೆಯೊಳಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಸುಮಾರು 2 ಗಂಟೆಗಳ ಕಾಲ ಬಾಗಿಲಲ್ಲಿ ಕಾದು ಹೆರಿಗೆಯಾಗಿದೆ. ಇದ್ರಿಂದಾಗಿ ಮಗು ಬಿದ್ದು ಸಾವನ್ನಪ್ಪಿರುವ ಅಮಾನವೀಯ ಘಟನೆ ನಡೆದಿದೆ.
ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಇಂತಹದೊಂದು ಅಮಾನವೀಯ ಘಟನೆ ನಡೆದಿದ್ದು, ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಆಸ್ಪತ್ರೆಗೆ ಬಂದ ಗರ್ಭಣಿಯನ್ನ ಕೋವಿಡ್ ಟೆಸ್ಟ್ ಇಲ್ಲದೆ ಇರುವ ಕಾರಣಕ್ಕೆ ಸೇರಿಸಿಕೊಂಡಿಲ್ಲ. ಬುಧವಾರ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದ್ರೆ, ವೈದ್ಯರು ಹಾಗೂ ಸಿಬ್ಬಂದಿಯ ಕ್ರೂರ ನಡೆಯಿಂದಾಗಿ ಮಗು ಸಾವನ್ನಪ್ಪಿದೆ ಅನ್ನೋ ಗಂಭೀರ ಆರೋಪ ಕೇಳಿ ಬಂದಿದೆ.