ಪ್ರಜಾಸ್ತ್ರ ಸುದ್ದಿ
ಧಾರವಾಡ: ಪುಟ್ಟ ಮಕ್ಕಳನ್ನು ಕೊಂದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ. ಮಕ್ಕಳಾದ ದರ್ಶನ್(04), ಸುಮಾ(05) ಹಾಗೂ ತಾಯಿ ಸಾವಿತ್ರಿ ಸರಕಾರ(32) ಮೃತರೆಂದು ತಿಳಿದು ಬಂದಿದೆ.
ಏನೂ ಅರಿಯದ ಮಕ್ಕಳು ಹಾಗೂ ತಾಯಿಯ ಸಾವಿಗೆ ಇಡೀ ಗ್ರಾಮವೇ ಕಂಬನಿ ಮಿಡಿಯುತ್ತಿದೆ. ಯಾವ ಕಾರಣಕ್ಕೆ ಈ ರೀತಿ ಮಾಡಲಾಗಿದೆ ಅನ್ನೋದು ತಿಳಿದು ಬಂದಿಲ್ಲ. ನವಲಗುಂದ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆಯಿಂದ ಸತ್ಯ ಹೊರ ಬರಬೇಕಿದೆ.