ರೌಡಿಶೀಟರ್ ಬಿಜೆಪಿ ಅಭ್ಯರ್ಥಿ, ಮೋದಿ ಸಭೆ ರದ್ದು

140

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ವಿರುದ್ಧ ಸಾಕಷ್ಟು ಪ್ರಕರಣಗಳಿವೆ. ಮಕ್ಕಳ ಹಾಲಿನ ಪೌಡರ್ ಕಳ್ಳತನ ಪ್ರಕರಣದಲ್ಲಿ ಅಪರಾಧ ಸಾಬೀತಾಗಿದೆ. ಹೀಗಾಗಿ ಸಾಕಷ್ಟು ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಸಭೆ ರದ್ದಾಗಿದೆ.

ಮೇ 6ರಂದು ಪ್ರಧಾನಿ ಮೋದಿ ಅಭ್ಯರ್ಥಿ ಮಣಿಕಂಠ ರಾಠೋಡ ಪರ ಮತಯಾಚನೆ ಮಾಡಬೇಕಿತ್ತು. ರೌಡಿ ಶೀಟರ್ ಪಟ್ಟಿಯಲ್ಲಿ ಮಣಿಕಂಠ ರಾಠೋಡ ಹೆಸರಿದೆ. ಹಲವರು ಪ್ರಕರಣಗಳಿವೆ. ಮೋದಿ ಬಂದು ಪ್ರಚಾರ ಮಾಡಿದರೆ ಪಕ್ಷಕ್ಕೆ ದೊಡ್ಡ ಮಟ್ಟದ ಡ್ಯಾಮೇಜ್ ಆಗುವ ಹಿನ್ನಲೆಯಲ್ಲಿ ಸಾರ್ವಜನಿಕ ಸಭೆ ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಪ್ರಕಣೆಯಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!