ಪ್ರಜಾಸ್ತ್ರ ಸುದ್ದಿ
ನವದೆಹಲಿ: ಊಟಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಇದರಲ್ಲಿ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಸೇರಿದಂತೆ 14 ಅಧಿಕಾರಿಗಳಿದ್ದರು. ಎಂಐ-17 ಹೆಲಿಕಾಪ್ಟರ್ ಪತನಗೊಂಡಿದ್ದು, ಇದರಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಇದೀಗ ಘಟನಾ ಸ್ಥಳಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೊರಟಿದ್ದಾರೆ. ಘಟನೆ ಬಗ್ಗೆ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದು, ದುರಂತ ಸಂಭವಿಸಿದ ಸ್ಥಳಕ್ಕೆ ಹೊರಟಿದ್ದಾರೆ. ಇನ್ನು ಪ್ರಧಾನಿ ಮೋದಿ ತುರ್ತು ಸಚಿವ ಸಂಪುಟ ಕರೆದಿದ್ದು, ಕೆಟ್ಟ ಸುದ್ದಿಯೊಂದು ಬರುವ ಸಾಧ್ಯತೆಯಿದೆ.