ಸೇನಾ ಪಡೆ ಮುಖ್ಯಸ್ಥ ರಾವತ್ ಇದ್ದ ಹೆಲಿಕಾಪ್ಟರ್ ಪತನ: ನಾಲ್ವರ ಸಾವು

554

ಪ್ರಜಾಸ್ತ್ರ ಸುದ್ದಿ

ಚೆನ್ನೈ: ಊಟಿ ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು ಇದ್ದರು ಎಂದು ತಿಳಿದು ಬಂದಿದೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.

ಊಟಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಅಧಿಕಾರಿಗಳು ಹೊರಟಿದ್ದರು. ಇದರಲ್ಲಿ ಬಿಪಿನ್ ಪತ್ನಿ ಹಾಗೂ ಬ್ರಿಗೆಡಿಯರ್ ಇದ್ದರು. ನಾಲ್ವರು ಮೃತಪಟ್ಟಿರುವುದು ತಿಳಿದು ಬಂದಿದೆ. ಮೂವರನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಈ ದುರಂತದಲ್ಲಿ ಯಾರೆಲ್ಲ ಮೃತಪಟ್ಟಿದ್ದಾರೆ ಅನ್ನೋದು ಇನ್ನು ತಿಳಿದು ಬಂದಿಲ್ಲ. ಸೇನಾ ಪಡೆ, ಪೊಲೀಸರು ಸ್ಥಳಕ್ಕೆ ಹೋಗಿದ್ದ ಶೋಧಕಾರ್ಯ ನಡೆದಿದೆ. ಇನ್ನು ಇದರ ತನಿಖೆಗೆ ಆದೇಶಿಸಲಾಗಿದೆ. ಹವಾಮಾನ ವೈಪರೀತ್ಯವೇ ಇದಕ್ಕೆ ಕಾರಣವೆಂದು ಸಧ್ಯಕ್ಕೆ ಹೇಳಲಾಗುತ್ತಿದೆ. ತನಿಖೆ ಬಳಿಕ ಸಂಪೂರ್ಣ ಮಾಹಿತಿ ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!