ಕ್ರಿಸ್ಮಸ್, ಹೊಸ ವರ್ಷಾಚರಣೆ ನಿರ್ಬಂಧ ಬಗ್ಗೆ ಸಿಎಂ ಏನಂದರು?

603

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ನಿರ್ಬಂಧಕ್ಕೆ ಸಂಬಂಧಿಸಿದಂತೆ ಇನ್ನು ಯಾವುದೇ ತೀರ್ಮಾನಕ್ಕೆ ಬಂದಿಲ್ಲವೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿಗ್ಗಾಂವಿಗೆ ತೆರಳುವ ಸಂದರ್ಭದಲ್ಲಿ ಮಾತನಾಡಿದರು.

ಅಧಿವೇಶನದದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಆಗೇ ಆಗುತ್ತೆ. ಯಾಕಂದರೆ ಬೆಳಗಾವಿ ಅಧಿವೇಶನ ಅಂದರೆ ಈ ಭಾಗದ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಲ್ಪಿಸುವುದಾಗಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನ ಮಾಡುತ್ತೇವೆ.

ಇನ್ನು ಬೆಳೆ ಹಾನಿ ಹಿನ್ನಲೆಯ ಪರಿಹಾರ ವಿತರಣೆ ಆರಂಭವಾಗಿದೆ. ಪರಿಹಾರ ಅನ್ನೋ ಆ್ಯಪ್ ಮೂಲಕ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!