ಡಾ.ಪಂಡಿತಾರಾಧ್ಯ, ಡಾ.ಪಟ್ಟದ್ದೇವರಿಗೆ ಚುಟುಕು ಭೂಷಣ ಪ್ರಶಸ್ತಿ

107

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಭಾಲ್ಕಿ: ಶಿವ ಸಂಚಾರದ ಖ್ಯಾತಿ ಸಾಣೀಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಹಾಗೂ ಅನುಭವ ಮಂಟಪದ ಅಧ್ಯಕ್ಷರಾದ ಭಾಲ್ಕಿಮಠದ ಡಾ.ಬಸವಲಿಂಗ ಪಟ್ಟದ್ದೇವರು ‘ಚುಟುಕು ಭೂಷಣ’ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕಚುಸಾಪ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಜಿಲ್ಲಾಧ್ಯಕ್ಷ ಸಂಗಮೇಶ ಎನ್ ಜವಾದಿ ಯವರು ತಿಳಿಸಿದ್ದಾರೆ.

ಅದೇ ರೀತಿ ಭಾಲ್ಕಿಮಠದ ಕಿರಿಯ ಪರಮ ಪೂಜ್ಯ ಗುರುಬಸವ ಪಟ್ಟದ್ದೇವರು ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ‘ಚುಟುಕು ಚೇತನ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಮೇ 25 ಗುರುವಾರ ಮುಂಜಾನೆ 11 ಗಂಟೆಗೆ ಭಾಲ್ಕಿ ಹಿರೇಮಠ ಸಂಸ್ಥಾನದ ಚನ್ನಬಸವಾಶ್ರಮ ಸಭಾಂಗಣದಲ್ಲಿ ಜರುಗಲಿರುವ 11ನೇ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ರಾಜ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!