ಮಂಗಳೂರು ಹಿಂಸಾಚಾರ: ಪರೀಕ್ಷೆ ಮುಂದೂಡಿಕೆ

340

ಮಂಗಳೂರು: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ಇಳಿಯಿತು. ಅಲ್ದೇ, ಇಬ್ಬರು ಬಲಿಯಾದ್ರು. ಹೀಗಾಗಿ ಕರ್ಫ್ಯೂ ಜಾರಿ ಮಾಡಲಾಗಿದೆ. ಇದ್ರಿಂದಾಗಿ ಇಂದು ನಡೆಯಬೇಕಿದ್ದ ಇಂಜಿನಿಯರಿಂಗ್ ಪರೀಕ್ಷೆಗಳನ್ನ ಮುಂದೂಡಲಾಗಿದೆ.

ಕರ್ಫ್ಯೂ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ದೇ, ವಿಶ್ವವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನ ಮುಂದೂಡಲಾಗಿದೆ ಎಂದು ಮೌಲ್ಯಮಾಪನ ರಿಜಿಸ್ಟರ್ ತಿಳಿಸಿದ್ದಾರೆ. ಇದರ ಜೊತೆಗೆ ಮುಂದೂಡಿದ ಪರೀಕ್ಷೆಯ ಪರಿಷ್ಕೃತ ವೇಳಾ ಪಟ್ಟಿಯನ್ನ ಶೀಘ್ರದಲ್ಲಿ ಬಿಡಲಾಗುವುದು. ವಿವಿ ವೆಬ್ ಸೈಟ್ ನಲ್ಲಿ ನೋಡಬಹುದಾಗಿದೆ ಅಂತಾ ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!