ನವದೆಹಲಿ: ಪೌರತ್ವ ಕಾಯ್ದೆ ತಿದ್ದುಪಡಿ ಜಾರಿಗೆ ವಿರೋಧಿಸಿ ದೆಹಲಿಯಲ್ಲಿಂದು ತೀವ್ರ ಪ್ರತಿಭಟನೆ ನಡೆಸಲಾಗಿದೆ. ಇದರ ಪರಿಣಾಮ ಸರ್ಕಾರಿ ಸಾರಿಗೆ ಬಸ್, ಖಾಸಗಿ ಕಾರುಗಳು ಸುಟ್ಟು ಭಸ್ಮವಾಗಿವೆ.
ಬೆಳಗ್ಗೆಯಿಂದ ರಾಷ್ಟ್ರರಾಜಧಾನಿಯಲ್ಲಿ ಪ್ರತಿಭಟನೆ ನಡೆಯುತಿತ್ತು. ಈ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿರ್ಲಿಲ್ಲ. ಆದ್ರೆ, ಸಂಜೆ ದುಷ್ಕರ್ಮಿಗಳ ಭಾರತ್ ನಗರದಲ್ಲಿ ದೆಹಲಿ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗೆ ಬೆಂಕಿ ಹಚ್ಚಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ರೂ ಯಾವುದೇ ಉಪಯೋಗವಾಗ್ಲಿಲ್ಲ.
ಘಟನಾ ಸ್ಥಳಕ್ಕೆ ಪೊಲೀಸ್ರು ಆಗಮಿಸಿದ್ದು ಬಿಗಿವಿನ ವಾತಾವರಣ ನಿರ್ಮಾಣವಾಗಿದೆ. ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ಕಾಯ್ದೆ ವಿರೋಧಿ ಭಾರಿ ಪ್ರಮಾಣದಲ್ಲಿ ಪ್ರತಿಭಟನೆ ನಡೆಯುತ್ತಿದೆ.