ದೇವರ ಹಿಪ್ಪರಗಿ: ಪೌರ ಕಾರ್ಮಿಕರ ದಿನಾಚರಣೆ

318

ಪ್ರಜಾಸ್ತ್ರ ಸುದ್ದಿ

ದೇವರ ಹಿಪ್ಪರಗಿ: ಪಟ್ಟಣ ಸ್ವಚ್ಚವಾಗಿಡುವುದರಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದೆ. ಊರನ್ನು ಸುಂದರವಾಗಿಡಲು ಪೌರ ಕಾರ್ಮಿಕರು ಹಗಲಿರುಳು ಶ್ರಮಿಸುತ್ತಾರೆ ಎಂದು ತಹಶೀಲ್ದಾರ್ ಪ್ರಕಾಶ ಸಿಂದಗಿ ಹೇಳಿದರು.

ಪಟ್ಟಣ ಪಂಚಾಯ್ತಿವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಭಾಗವಹಿಸಿ ಮಾತನಾಡಿದ ತಹಶೀಲ್ದಾರ್ ಪ್ರಕಾಶ ಸಿಂದಗಿ, ಸಮಾಜಕ್ಕೆ ಪೌರ ಕಾರ್ಮಿಕರ ಕೊಡುಗೆ ಅಪಾರ ಎಂದರು.

ಡಾ. ಪ್ರಭುಗೌಡ  ಲಿಂಗದಳಿ ಪೌರ ಕಾರ್ಮಿಕರಿಗೆ ಸನ್ಮಾನಿಸಿ ಮಾತನಾಡಿದರು. ಈ ವೇಳೆ ಪೌರ ಕಾರ್ಮಿಕರಿಗೆ ಹಾಗೂ ಸದಸ್ಯರಿಗೆ ವಿವಿಧ ಮನರಂಜನೆ ಚಟುವಟಿಕೆಗಳನ್ನು ಆಯೋಜಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯಾಧಿಕಾರಿ ಎಲ್.ಡಿ ಮುಲ್ಲಾ, ಕಾಂಗ್ರೆಸ್ ಮುಖಂಡರ ಬಸೀರ ಸೇಟ್ ಬೇಪಾರಿ ಅನೇಕರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!