ನಾಳೆ ಪ್ರಮಾಣ ವಚನ: ಸ್ಟೇಡಿಯಂ ಸುತ್ತ ಭಾರೀ ಭದ್ರತೆ

116

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 16ನೇ ವಿಧಾನಸಭಾದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಮೇ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಸಮಾರಂಭ ನಡೆಯುವ ಕಂಠೀರವ ಸ್ಟೇಡಿಯಂ ಸುತ್ತ ಬಿಗಿ ಪೊಲೀಸ್ ಬಂದೋಬಸ್ತಿ ಮಾಡಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಜೊತೆಗೆ ರಾಜ್ಯದ ನಾನಾ ಭಾಗದಿಂದ ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಪೊಲೀಸ್ ಇಲಾಖೆ ಎಲ್ಲ ಕಡೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಪೊಲೀಸ್ ಆಯುಕ್ತರು, ಸಂಚಾರಿ ವಿಭಾಗದ ಆಯುಕ್ತರು, ಜಂಟಿ ಆಯುಕ್ತರು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 8 ಡಿಸಿಪಿಗಳು ಭದ್ರತೆಯ ಜವಾಬ್ದಾರಿ ತೆಗೆದುಕೊಂಡಿದ್ದಾರೆ. 8 ಗೇಟ್ ಗಳಲ್ಲಿ ಒಬ್ಬರು ಎಸಿಪಿ ನೇತೃತ್ವದಲ್ಲಿ ಭದ್ರತೆ ನಿಯೋಜಿಸಲಾಗಿದೆ. 500 ಪೊಲೀಸ್ ಸಿಬ್ಬಂದಿ ಸ್ಟೇಡಿಯಂಗೆ ಹೋಗುವ ರಸ್ತೆಯ ಸುತ್ತ ಸಂಚಾರ ವ್ಯವಸ್ಥೆ ಮಾಡಲಿದ್ದಾರೆ. 1,500ಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ದಾರೆ.

ಪ್ರಮಾಣ ವಚನ ಸಮಾರಂಭದಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು ಸೇರಿದಂತೆ ಕಾಂಗ್ರೆಸ್ ಸಮಾನ ಮನಸ್ಕ ಪಕ್ಷಗಳ ನಾಯಕರು ಭಾಗವಹಿಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!