ಪ್ರಜಾಸ್ತ್ರ ಸುದ್ದಿ
ಬಳ್ಳಾರಿ: ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಎದುರು ನಾಯಿಯಂತೆ ಇರ್ತಾರೆ ಅನ್ನೋ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇದು ಸಿದ್ದರಾಮಯ್ಯನವರ ವ್ಯಕ್ತಿತ್ವ ತೋರಿಸುತ್ತೆ. ನಾಯಿ ನಿಯತ್ತಿನ ಪ್ರಾಣಿ ಎಂಬುವುದು ಅವರಿಗೆ ಗೊತ್ತಿಲ್ಲ ಎಂದು ಕಾಣಿಸುತ್ತೆ ಎಂದರು.
ನಾನು ಸಿದ್ದರಾಮಯ್ಯನವರಂತೆ ಸುಳ್ಳು ಹೇಳಿಕೊಂಡು ತಿರುಗಾಡುವುದಿಲ್ಲ. ನಿಯತ್ತಾಗಿ ಸರ್ಕಾರ ನಡೆಸುತ್ತಿದ್ದೇನೆ. ನಾಡಿನ ಜನತೆ ಅವರಿಗೆ ಉತ್ತರ ಕೊಡುತ್ತಾರೆ ಎಂದು ಪ್ರತ್ಯುತ್ತರ ನೀಡಿದರು.