ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಹಾಗೂ ಪತ್ನಿ ಗೀತಾ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಆರ್.ಟಿ ನಗರದ ನಿವಾಸಕ್ಕೆ ಭೇಟಿ ನೀಡಿದ ದಂಪತಿ ಸಿಎಂ ಜೊತೆಗೆ ಮಾತುಕತೆ ನಡೆಸಿದರು.
ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವುದು ರಾಜಕೀಯ ನಾಯಕರ ಭೇಟಿ ಸಾಕಷ್ಟು ಕುತೂಹಲ ಮೂಡಿಸುತ್ತವೆ. ಅದರಂತೆ ಗೀತಾ ಶಿವರಾಜಕುಮಾರ್ ಅವರ ಸಹೋದರ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪ, ಅಕ್ಕನ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ್ದಾರೆ. ಆದರೆ, ಶಿವಣ್ಣ ಹಾಗೂ ಪತ್ನಿ ಗೀತಾ ಅವರು ಸಿಎಂ ಭೇಟಿ ಮತ್ತಷ್ಟು ಕುತೂಹಲ ಮೂಡಿಸಿದೆ.