ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿನ ವಿವಿಧ ಸಮಸ್ಯೆಗಳ ಚರ್ಚೆಗೆ ಅಕ್ಟೋಬರ್ 7ರಂದು ಸರ್ವಪಕ್ಷ ಸಭೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರು ಕರೆದಿದ್ದಾರೆ. ಅಧಿವೇಶನದ ಸಂದರ್ಭದಲ್ಲಿ ಸರ್ವಪಕ್ಷ ಸಭೆ ಕರೆಯುವ ಕುರಿತು ಹೇಳಿದ್ದರು.
ಗೃಹ ಕಚೇರಿ ಕೃಷ್ಣದಲ್ಲಿ ಸಭೆ ಕರೆಯಲಾಗಿದೆ. ಕಾಂಗ್ರೆಸ್, ಜೆಡಿಎಸ್ ನಾಯಕರು, ಪರಿಷತ್ ವಿಪಕ್ಷ ನಾಯಕರು ಸೇರಿದಂತೆ ಇತರೆ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ. ಈ ವೇಳೆ ರಾಜ್ಯದಲ್ಲಿ ಸೃಷ್ಟಿಯಾದ ಪ್ರವಾಹ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ.