ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ್ಮೇಲೆ ಮಂಡಿಸುತ್ತಿರುವ ಮೊದಲ ಬಜೆಟ್ ಇದು. ಹಣಕಾಸು ಖಾತೆಯೂ ಅವರ ಬಳಿಯೇ ಇರುವುದರಿಂದ ಬಜೆಟ್ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ತಮ್ಮ ಚೊಚ್ಚಲ ಬಜೆಟ್ ನಲ್ಲಿ ರಾಜ್ಯದ ಜನತೆಗೆ ಏನೆಲ್ಲ ಕೊಡುಗೆ ನೀಡುತ್ತಾರೆ ಅನ್ನೋದು ಇನ್ನೇನು ತಿಳಿಯಲಿದೆ.
ಬಜೆಟ್ ಮಂಡನೆಗೂ ಮೊದಲು ಮುಖ್ಯಮಂತ್ರಿ ಬೊಮ್ಮಾಯಿ ನಗರದ ಶ್ರೀಕಂಠೇಶ್ವರ ದೇವಸ್ಥಾನ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.