ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ನಾಯಕರು ಭೇಟಿ, ಚರ್ಚೆ, ಸಭೆಗಳು ಸಾಕಷ್ಟು ಕುತೂಹಲ ಮೂಡಿಸುತ್ತಿವೆ. ಕಳೆದ ರಾತ್ರಿ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರಹಸ್ಯ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.
ಈ ಭೇಟಿಯ ವೇಳೆ ಸುಮಾರು 40 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರಂತೆ. ರಾಜ್ಯದಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆ, ಶೇಕಡ 40ರಷ್ಟು ಭ್ರಷ್ಟಾಚಾರಾದ ಆರೋಪ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣ, ಸಚಿವರಾದ ವಿ.ಸೋಮಣ್ಣ, ನಾರಾಯಣಗೌಡ ಕಾಂಗ್ರೆಸ್ ಸೇರುವ ಚರ್ಚೆ, ಮೋದಿ ಹಾಗೂ ಅಮಿತ್ ಶಾ ಸತತ ಆಗಮನದ ವಿಚಾರ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಪಕ್ಷದ ಮೇಲೆ ಮೇಲಿಂದ ಮೇಲೆ ಆಗುತ್ತಿರುವ ಡ್ಯಾಮೇಜ್ ನಿಂದ ತಪ್ಪಿಸಿಕೊಳ್ಳುವುದು, ವಿಪಕ್ಷಗಳಿಗೆ ಮತ್ತಷ್ಟು ಆಹಾರವಾಗುತ್ತಿರುವ ಘಟನೆಗಳಿಂದ ಹೊರ ಬರಲು ಏನು ಮಾಡಬೇಕು, 2023ರ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಲು ಮಾಡಬೇಕಾದ ತಂತ್ರಗಳ ಕುರಿತು ಚರ್ಚಿಸಿದ್ದಾರಂತೆ.