ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಂದಾಯ ಇಲಾಖೆಯ ಯೋಜನೆಯಾದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಪ್ರಯುಕ್ತ ಕಂದಾಯ ಸಚಿವ ಆರ್.ಅಶೋಕ್ ಪ್ರತಿ ತಿಂಗಳ ಕೊನೆಯ ಶನಿವಾರ ಹಾಗೂ ಭಾನುವಾರ ಗ್ರಾಮ ವಾಸ್ತವ್ಯ ಮಾಡುತ್ತಾರೆ. ಈ ಬಾರಿ ಮುಖ್ಯಮಂತ್ರಿ ಬೊಮ್ಮಾಯಿ ತವರು ಕ್ಷೇತ್ರವಾದ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ ವಾಸ್ತವ್ಯಕ್ಕೆ ಸಜ್ಜಾಗಿದ್ದಾರೆ.
ಸಚಿವ ಆರ್.ಅಶೋಕ್ ಅವರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸಾಥ್ ನೀಡಲಿದ್ದಾರೆ. ತಮ್ಮದೆ ಕ್ಷೇತ್ರವಾಗಿರುವುದ್ದರಿಂದ ಗ್ರಾಮದಲ್ಲಿ ಉಳಿದುಕೊಳ್ಳುವ ಮೂಲಕ ಜನರ ಕುಂದು ಕೊರತೆಗಳನ್ನು ಕೇಳಲಿದ್ದಾರೆ. ಈ ಮೂಲಕ ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಒಂದಿಷ್ಟು ಮಾಹಿತಿಯೂ ಕಲೆ ಹಾಕಿದಂತೆಯಾಗಲಿದೆ.