ಪಿಎಂ ಭೇಟಿಯಾದ ಸಿಎಂ.. ಬಿಟ್ ಕಾಯಿನ್ ಬಗ್ಗೆ ಏನಂದರು?

246

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಹಲವು ವಿಚಾರಗಳ ಕುರಿತು ಚರ್ಚಿಸಿದ್ದಾರೆ. ಈ ಭೇಟಿ ಬಿಟ್ ಕಾಯಿನ್ ಹಗರಣ ಕೇಳಿ ಬಂದಿರುವುದರಿಂದ ಆಗಿದೆ ಅನ್ನೋ ಮಾತುಗಳು ಕೇಳಿ ಬಂದಿವೆ. ಆದರೆ, ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಅಂತಿದ್ದಾರೆ ಸಿಎಂ ಬೊಮ್ಮಾಯಿ.

ಪ್ರಧಾನಿ ಭೇಟಿ ಬಗ್ಗೆ ಮಾತನಾಡಿದ ಅವರು, ಪ್ರಧಾನಿ ಜೊತೆ ಹಲವು ವಿಚಾರ ಚರ್ಚೆ ಮಾಡಿದ್ದೇನೆ. 100 ದಿನಗಳಲ್ಲಿ ಸರ್ಕಾರದ ಸಾಧನೆ ಬಗ್ಗೆ ಶ್ಲಾಘಿಸಿದ್ದಾರೆ. ಇದರ ಹೊರತಾಗಿ ರಾಜಕೀಯವಾಗಿ ಯಾವುದೇ ವಿಷಯ ಚರ್ಚೆಯೂ ಆಗಿಲ್ಲ. ಬಿಟ್​ ಕಾಯಿನ್​ ಬಗ್ಗೆಯೂ ಚರ್ಚೆ ಮಾಡಿಲ್ಲ ಎಂದು ಸಿಎಂ ಬೊಮ್ಮಾಯಿ ಸಮಜಾಯಿಸಿ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!