ಯುವಜನೋತ್ಸವ ಲೋಗೋ ಬಿಡುಗಡೆ

185

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸ್ವಾಮಿ ವಿವೇಕಾನಂದ ಅವರ ಜನ್ಮ ದಿನದ ನಿಮಿತ್ತ ಜನವರಿ 12ರಂದು ಈ ಬಾರಿ ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದ ಲೋಗೋವನ್ನು ಮುಖ್ಯಮಂತ್ರಿ ಬೊಮ್ಮಾಯಿ ಶನಿವಾರ ಬಿಡುಗಡೆ ಮಾಡಿದರು.

ಈ ವೇಳೆ ರಾಜ್ಯ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ನಟಿ ತಾರಾ ಅನುರಾಧ ಉಪಸ್ಥಿತರಿದ್ದರು.  

ಜನವರಿ 12ರಿಂದ 16ರವರೆಗೆ ನಾಲ್ಕು ದಿನಗಳ ಕಾಲ ಯುವಜನೋತ್ಸವ ನಡೆಯಲಿದೆ. ಉದ್ಘಾಟನೆಗೆ ಪ್ರಧಾನಿ ಮೋದಿ ಬರಲಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ನಡೆಯುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ದೇಶದ ಹಲವು ಭಾಗಗಳ ಯುವ ಪಡೆ ಭಾಗವಹಿಸಲಿದೆ.




Leave a Reply

Your email address will not be published. Required fields are marked *

error: Content is protected !!