ಪ್ರಜಾಸ್ತ್ರ ಸುದ್ದಿ
ಶಿಗ್ಗಾಂವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ತಹಶೀಲ್ದಾರ್ ಕಚೇರಿಗೆ ಕುಟುಂಬಸ್ಥರು, ಪಕ್ಷದ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಹುಬ್ಬಳ್ಳಿಗೆ ಆಗಮಿಸಿದ ಅವರು ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಂತರ ಅಮರಗೋಳದಲ್ಲಿರುವ ತಂದೆ, ತಾಯಿ ಸ್ಮಾರಕ್ಕೆ ಪೂಜೆ ಸಲ್ಲಿಸಿ ಶಿಗ್ಗಾಂವಿಗೆ ಬಂದರು. ಅಲ್ಲಿಗೆ ಮೊದಲು ಗ್ರಾಮ ದೇವತೆಗೆ ಪೂಜೆ ಸಲ್ಲಿಸಿದರು. ನಂತರ ಚನ್ನಮ್ಮ, ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ತಹಶೀಲ್ದಾರ್ ಕಚೇರಿಗೆ ತೆರಳಿದರು.
ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಏಪ್ರಿಲ್ 19ರಂದು ಭರ್ಜರಿ ಮೆರವಣಿಗೆ ಮೂಲಕ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಈ ವೇಳೆ ನಟ ಸದೀಪ್, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಪಕ್ಷದ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ.