ಪ್ರಜಾಸ್ತ್ರ ಸುದ್ದಿ
ಧಾರವಾಡ: ಮುಂಬರುವ ಚುನಾವಣೆ ಸಂಬಂಧ ರಾಜಕೀಯ ಪಕ್ಷಗಳ ತಯಾರಿ ಭರ್ಜರಿಯಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹುಟ್ಟೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಅವರಿಗೆ ಅಲ್ಲಿನ ಜನತೆಗೆ ಭವ್ಯ ಸ್ವಾಗತ ಕೋರಿದರು.
ಜಿಲ್ಲೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ ನಡೆಸಿದರು. ಜೊತೆಗೆ ಹಲವು ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ತಮ್ಮೂರಿನ ಮಗ ಮುಖ್ಯಮಂತ್ರಿಯಾಗಿದ್ದು, ಊರಿಗೆ ಆಗಮಿಸಿದ್ದಕ್ಕೆ ಪ್ರೀತಿಯಿಂದ ಸ್ವಾಗತಿಸಿದರು.