ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು ಇವರೆ. ಸಿಎಂ ಬೊಮ್ಮಾಯಿ ಆರ್.ಎಸ್.ಎಸ್ ಕೈ ಗೊಂಬೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಗೆ ಕಾಮಾಲೆ ರೋಗ ಬಂದಿದೆ. ಸಾವರ್ಕರ್ ಫೋಟೋ ಹಾಕಿದ್ದಾರೆ ಬೇಡ ಅನ್ನುವುದಿಲ್ಲ. ಟಿಪ್ಪು ಫೋಟೋ ತೆಗೆದಿದ್ದಾರೆ. ಹೀಗೆ ಮಾಡಿದರೆ ಗಲಭೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯವರು ತಪ್ಪು ಮಾಡಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಾರೆ. ಈ ಘಟನೆಯಲ್ಲಿ ಎಸ್ ಡಿಪಿಐ ಕೈವಾಡವಿದ್ದರೆ ಕ್ರಮ ತೆಗೆದುಕೊಳ್ಳಲಿ. ಸರ್ಕಾರ ಅವರದೆ ಇದೆ ಎಂದು ಕಿಡಿ ಕಾರಿದರು.