ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಇದೆ: ಸಿಎಂ ಬೊಮ್ಮಾಯಿ

528

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಲಬುರಗಿ, ಯಾದಗಿರಿ, ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಇದೆ. ಈ ಭಾಗದಲ್ಲಿ ಆರೋಗ್ಯದಲ್ಲಿ ಸುಧಾರಣೆ ಸಾಧಿಸಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ 120 ಆಂಬ್ಯುಲೆನ್ಸ್ ವಾಹನಗಳನ್ನು ಸೇವೆಗೆ ಸಮರ್ಪಿಸಿದರು. ಈ ವೇಳೆ ಮಾತನಾಡಿದ ಅವರು, ಆರೋಗ್ಯದಲ್ಲಿ ಯಾವಾಗ ಏರುಪೇರು ಆಗುತ್ತದೆ ಗೊತ್ತಾಗಲ್ಲ. ಹೀಗಾಗಿ ಆಂಬ್ಯುಲೆನ್ಸ್ ಗಳು ತುರ್ತು ಚಿಕಿತ್ಸೆ ನೀಡುವ ರೀತಿಯಲ್ಲಿರಬೇಕು ಎಂದರು.

ಆರೋಗ್ಯ ಸಚಿವರು ಸ್ವತಃ ವೈದ್ಯರಾಗಿದ್ದಾರೆ. ಹೀಗಾಗಿ ಆರೋಗ್ಯ ಕ್ಷೇತ್ರಕ್ಕೆ ಏನು ಸೌಲಭ್ಯ ಬೇಕೋ ಅದೆಲ್ಲವನ್ನು ಮಾಡುತ್ತಿದ್ದಾರೆ. ಅವರು ತುಂಬಾ ಬುದ್ಧಿವಂತರು ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ ಅವರನ್ನು ಶ್ಲಾಘಿಸಿದರು.




Leave a Reply

Your email address will not be published. Required fields are marked *

error: Content is protected !!