ಅಧಿವೇಶನದಿಂದ ನೇರವಾಗಿ ಕೆಸಿಸಿ ನೋಡಲು ಬಂದ ಸಿಎಂ

160

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅಧಿವೇಶನದ ಕೊನೆಯ ದಿನವಾದ ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಅದನ್ನು ಮಗಿಸಿಕೊಂಡು ಸೀದಾ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದು ಕೆಸಿಸಿ ಪಂದ್ಯ ವೀಕ್ಷಿಸಿದರು ಕನ್ನಡ ಚಲನಚಿತ್ರ ಕಪ್ ಟೂರ್ನಿಯ 6 ತಂಡಗಳನ್ನು ಪರಿಚಯಿಸಿಕೊಂಡ ಸಿಎಂ ಬೊಮ್ಮಾಯಿ ಅವರಿಗೆ ಶುಭ ಕೋರಿದರು. ಈ ವೇಳೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಲಹರಿ ವೇಲು, ನಟರಾದ ಸುದೀಪ್, ಗಣೇಶ್, ಡಾಲಿ ಧನಂಜಯ್ ಸೇರಿ ಇತರರು ಹಾಜರಿದ್ದರು.

ಇಂದು ಹಾಗೂ ನಾಳೆ ಎರಡು ದಿನಗಳ ಸಿಸಿಎಲ್ ಟೂರ್ನಿ ನಡೆಯಲಿದೆ. ಹ್ಯಾಟ್ರಿಕ್ ಹೀರೋ ಶಿವಣ್ಣ, ಕಿಚ್ಚ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್, ರಿಯಲ್ ಸ್ಟಾರ್ ಉಪೇಂದ್ರ, ಡಾಲಿ ಧನಂಜಯ್, ಧ್ರುವ್ ಸರ್ಜಾ ಅವರ ನಾಯಕತ್ವದ ತಂಡಗಳ ನಡುವೆ ಸೆಣಸಾಟ ನಡೆಯಲಿದೆ.

ಇಲ್ಲಿ ಒಂದೊಂದು ತಂಡದಲ್ಲಿ ಒಬ್ಬ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಆಟಗಾರರು ಭಾಗವಹಿಸುತ್ತಿದ್ದಾರೆ. ಬ್ರಿಯಾನ್ ಲಾರಾ, ಕ್ರಿಸ್ ಗೇಲ್, ಸುರೇಶ್ ರೈನಾ, ದಿಲ್ ಶ್ಯಾನ್ ಸೇರಿ ವೃತ್ತಿಪರ ಓರ್ವ ಆಟಗಾರರು ಒಂದೊಂದು ತಂಡದಲ್ಲಿ ಆಟವಾಡಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!