ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ನಾಡಿನಲ್ಲಿ ಎಲ್ಲರಿಗೂ ನಿವೇಶನ ನೀಡುವುದು ಹಾಗೂ ಹಂತ ಹಂತವಾಗಿ ಮನೆಗಳನ್ನ ನಿರ್ಮಿಸಿಕೊಡುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಜಿಲ್ಲೆಯ ಶಿಕಾರಿಪುರದಲ್ಲಿ ಆಯೋಜಿಸಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಮಾತ್ನಾಡಿದ್ರು.
ಪ್ರತಿಯೊಬ್ಬರಿಗೂ ಮನೆ ಹಕ್ಕು ಪತ್ರ ತಲುಪಿಸಲಾಗುವುದು. ಮಧ್ಯವರ್ತಿಗಳಿಗೆ ಹಣ ನೀಡಬಾರದು. ಯಾರಾದ್ರೂ ಹಣ ಕೇಳಿದ್ರೆ ಜಿಲ್ಲಾಧಿಕಾರಿಗೆ ಮಾಹಿತಿ ಕೊಡಿ ಎಂದು ಹೇಳಿದ್ರು. ಇನ್ನು ಈ ವರ್ಷ ಉತ್ತಮ ಮಳೆಯಾಗಿದ್ದು, ಕೃಷಿಯನ್ನ ಸುಸ್ತಿರಗೊಳಿಸುವುದು ಸರ್ಕಾರದ ಗುರಿ ಎಂದರು.
ಈ ವೇಳೆ ಸಂಸದ ಬಿ.ವೈ ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ, ಎಸ್ಪಿ ಕೆ.ಎಂ ಕಾಂತುರಾಜು ಸೇರಿದಂತೆ ಅನೇಕರು ಭಾಗವಹಿಸಿದ್ರು.