ಭ್ರಷ್ಟ ವ್ಯಕ್ತಿಯನ್ನು ಸಿಎಂ ಮಾಡಿರುವ ಬಿಜೆಪಿಗೆ ನೈತಿಕತೆ ಇದೆಯೇ?: ವಿ.ಎಸ್ ಉಗ್ರಪ್ಪ

336

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ವಿ.ಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದ್ದು, ಭ್ರಷ್ಟ ವ್ಯಕ್ತಿಯನ್ನು ಸಿಎಂ ಮಾಡಿರುವ ಬಿಜೆಪಿಗೆ ಯಾವ ನೈತಿಕತೆ ಇದೆ ಎಂದು ಕೇಳಿದ್ದಾರೆ.

ವಿ.ಎಸ್ ಉಗ್ರಪ್ಪ, ಮಾಜಿ ಸಚಿವ ಕೃಷ್ಣ ಭೈರೇಗೌಡ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದರು. ಭ್ರಷ್ಟಾಚಾರಿಗಳನ್ನ ಜೈಲಿಗೆ ಹಾಕುತ್ತಿದ್ದೇವೆ ಎಂದು ಹೇಳಿದವರು ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದರು. ಕಪ್ಪು ಹಣ ವಾಪಸ್ ತರುತ್ತೇವೆ ಎಂದರು. ಅದು ಆಗಿಲ್ಲ. ಲೋಕಪಾಲ ಕಾಯ್ದೆ ಜಾರಿಗೆ ಬರಬೇಕು ಎಂದು ಹೋರಾಟ ಮಾಡಿದವರು ಇಂದು ಸುಮ್ಮನಾಗಿದ್ದಾರೆ ಅಂತ ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!